ದೊಡ್ಮನೆಯ ದೊಡ್ಡ ಮಗ ಶಿವಣ್ಣ ಅಂದ್ರೆ ತಾಜ್ಮಹಲ್ ಮಾಂತ್ರಿಕ ಆರ್ ಚಂದ್ರುಗೆ ಇನ್ನಿಲ್ಲದ ವಿಶೇಷವಾದ ಪ್ರೀತಿ ಗೌರವ ಹಾಗೂ ಅಭಿಮಾನ.
ಇತ್ತೀಚಿಗೆ ನಾನು ತಾಜ್ಮಹಲ್ ನಿರ್ದೇಶಕ ಆರ್ ಚಂದ್ರು ಬಗ್ಗೆ ಬರೆದಾಗ ನಾನು ಉಲ್ಲೇಖ ಮಾಡಿದ್ದು ಕರುನಾಡ ಚಕ್ರವರ್ತಿ ಹ್ಯಾಟ್ರಿಕ್ ಶಿವರಾಜಕುಮಾರ ಹೆಸರನ್ನು ಕೂಡ, ಹೌದು ಶಿವಣ್ಣ ಮತ್ತು ಆರ್ ಚಂದ್ರು ಕಾಂಬಿನೇಷನ್ ಮಧ್ಯೆ ಬಂದಂತಹ ಮೈಲಾರಿ ಚಿತ್ರದ ಪ್ರತಿಯೊಂದು ಫ್ರೇಮ್ ಇವತ್ತಿಗೂ ಕಣ್ಮುಂದೆ ಹಾಗೆ ಬಂದು ನಿಲ್ಲುತ್ತದೆ, ಕಾರಣ ಶಿವರಾಜ್ ಕುಮಾರ್ ಅವರನ್ನ ಆರ್ ಚಂದ್ರು ತೋರಿಸಿದ ರೀತಿಯೇ ತುಂಬಾ ಸ್ಟೈಲಿಶ್ ಆಗಿತ್ತು ಹಾಗೂ ಅಷ್ಟೇ ಎಮೋಷನಲ್ ಕಂಟೆಂಟ್ ಅನ್ನ ಅದು ಕ್ಯಾರಿ ಮಾಡಿತ್ತು.
ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ಅಂದಾಗ ಚಂದ್ರುಗೆ ಇನ್ನಿಲ್ಲದ ಪ್ರೀತಿ, ಇತ್ತೀಚಿಗೆ ಶಿವಣ್ಣನ ಹುಟ್ಟುಹಬ್ಬದ ಸಂದರ್ಭದಲ್ಲಿಯೂ ಸಹ ಆರ್ ಚಂದ್ರು ಶಿವಣ್ಣನ ಜೊತೆಗೆ ಇದ್ದದ್ದು ಜೊತೆಗೆ ಆ ಹುಟ್ಟು ಹಬ್ಬವನ್ನು ಸಂಭ್ರಮಿಸಿದ್ದನ್ನ ನಾವೆಲ್ಲ ಕಣ್ಣಾರೆ ನೋಡಿದ್ದೇವೆ,
ಇತ್ತೀಚಿಗೆ ಗಾಂಧಿನಗರದಲ್ಲಿ ಹಾಗೂ ಸಿನಿಮಾ ಮಂದಿಯಲ್ಲಿ ಒಂದು ಚರ್ಚೆ ನಡೆಯುತ್ತಿತ್ತು ಅದೇನೆಂದರೆ ಮತ್ತೊಮ್ಮೆ ಆರ್ ಚಂದ್ರು ಶಿವಣ್ಣನ ಜೊತೆಗೊಂದು ಸಿನಿಮಾ ಮಾಡುತ್ತಾರೆ ಎಂಬುದು ಅದು ಈಗ ನಿಜವಾಗಿದೆ ಅದರ ಶೀರ್ಷಿಕೆ ಕೂಡ ಅನಾವರಣಗೊಂಡಿದೆ.
ಆನಂದ್ ಪಂಡಿತ್ ಅವರ ಜೊತೆಗೂಡಿ ಅದ್ದೂರಿ ಪ್ಯಾನ್ ಇಂಡಿಯಾ ಚಿತ್ರವೊಂದು ಮಾಡುವುದಕ್ಕೆ ಆರ್ ಚಂದ್ರು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.ಇಂದು
ಮುಂಬೈನಲ್ಲಿ ಚಿತ್ರದ ಶೀರ್ಷಿಕೆ ಹಾಗೂ ಮೋಷನ್ ಪೋಸ್ಟರ್ ಲಾಂಚ್ ಆಗಿಸಿದ್ದು ಎಲ್ಲರ ಹುಬ್ಬೇರಿಸುವಂತೆ ಮಾಡಿದೆ.

ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಸೇರಿದಂತೆ ದೇಶದ ಸೂಪರ್ ಸ್ಟಾರ್ ಗಳು ನಟಿಸುತ್ತಿರುವ ಈ ಚಿತ್ರಕ್ಕೆ “ಒರಿಜಿನಲ್ ಮಾನ್ ಸ್ಟರ್”(OM) ಎಂದು ನಾಮಕರಣ ಮಾಡಲಾಗಿದೆ.
ವಿನೂತನ ಪ್ರಯತ್ನಗಳಿಂದ ಹೆಸರಾಗಿರುವ ಕನ್ನಡದ ಸ್ಟಾರ್ ನಿರ್ದೇಶಕ ಹಾಗೂ ನಿರ್ಮಾಪಕ ಆರ್ ಚಂದ್ರು ಈಗ ಬಾಲಿವುಡ್ ಗೆ ನಿರ್ಮಾಪಕರಾಗಿ ಅಡಿಯಿಟ್ಟಿದ್ದಾರೆ. ಬಾಲಿವುಡ್ ನಲ್ಲಿ ಸಾಕಷ್ಟು ಹೆಸರು ಮಾಡಿರುವ ಆನಂದ್ ಪಂಡಿತ್ ಅವರೊಡಗೂಡಿ ಹಿಂದಿ ಚಿತ್ರವನ್ನು ನಿರ್ಮಿಸಲು ಮುಂದಾಗಿದ್ದಾರೆ. ಹಿಂದಿ ಮಾತ್ರವಲ್ಲದೆ ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಕನ್ನಡದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಮತ್ತು ತೆಲುಗಿನಲ್ಲಿ ಸುನೀಲ್ ಅವರು ನಾಯಕರಾಗಿ ನಟಿಸುತ್ತಿದ್ದು, ಹಿಂದಿ, ತಮಿಳು ಹಾಗೂ ಮಲಯಾಳಂ ನಲ್ಲೂ ಸುಪ್ರಸಿದ್ದ ಸ್ಟಾರ್ ನಟರು ನಾಯಕರಾಗಿ ನಟಿಸುತ್ತಿದ್ದಾರೆ. ಅವರು ಯಾರು ಎಂಬುದು ಸದ್ಯದಲ್ಲೇ ತಿಳಿಯಲಿದೆ.
ಎರಡೂವರೆ ವರ್ಷಗಳ ಹಿಂದೆ ಆರ್ ಚಂದ್ರು ನೂರಾರು ಕೋಟಿ ವೆಚ್ಚದಲ್ಲಿ ಆನಂದ್ ಪಂಡಿತ್ ಅವರೊಂದಿಗೆ ” ಕಬ್ಜ” ಎಂಬ ಸೂಪರ್ ಹಿಟ್ ಪ್ಯಾನ್ ಇಂಡಿಯಾ ಚಿತ್ರವನ್ನು ನಿರ್ಮಾಣ ಮಾಡಿದ್ದರು. ಆ ಚಿತ್ರ ಚಂದ್ರು ಅವರಿಗೆ ಹೆಸರು ಹಾಗೂ ಹಣ ಎರಡನ್ನು ತಂದುಕೊಟ್ಟಿತು. ಅದಲ್ಲದೆ ಪ್ರಪಂಚದಾದ್ಯಂತ ಈ ಚಿತ್ರ ಸುದ್ದಿ ಮಾಡಿತ್ತು. ಈ ಚಿತ್ರದ ನಂತರ ಆರ್ ಚಂದ್ರು ಏನು ಮಾಡುತ್ತಿದ್ದಾರೆ? ಎಂಬ ಪ್ರಶ್ನೆ ಎಲ್ಲರಲ್ಲೂ ಇತ್ತು. ಸಿನಿಮಾವನ್ನೇ ಉಸಿರಾಗಿಸಿಕೊಂಡಿರುವ ಆರ್ ಚಂದ್ರು ಅವರು “ಕಬ್ಜ” ನಂತರ ಈ ಅದ್ದೂರಿ ಚಿತ್ರದ ನಿರ್ಮಾಣಕ್ಕೆ ಸಿದ್ದತೆ ನಡೆಸಿಕೊಳ್ಳುತ್ತಿದ್ದರು. ಕನ್ನಡದ ಹೆಸರಾಂತ ನಿರ್ದೇಶಕ ಹಾಗೂ ನಿರ್ಮಾಪಕ ಆರ್ ಚಂದ್ರು, ಕನ್ನಡದ ಜನಪ್ರಿಯ ನಟರಾದ ಶಿವರಾಜಕುಮಾರ್ ಅವರು ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ ಈ ನೂತನ ಪ್ಯಾನ್ ಇಂಡಿಯಾ ಚಿತ್ರದ ಆರಂಭೋತ್ಸವನ್ನು ಬಾಲಿವುಡ್ ನ ಕೇಂದ್ರಸ್ಥಳವಾದ ಮುಂಬೈನಲ್ಲಿ ಅದ್ದೂರಿಯಾಗಿ ಮಾಡಿದ್ದಾರೆ. ಈ ನೂತನ ಚಿತ್ರಕ್ಕೆ “ಒರಿಜಿನಲ್ ಮಾನ್ ಸ್ಟರ್” ಎಂಬ ಯುನಿವರ್ಸಲ್ ಟೈಟಲ್ ಇಡಲಾಗಿದ್ದು, ಎಲ್ಲಾ ಭಾಷೆಗೂ ಈ ಶೀರ್ಷಿಕೆ ಹೊಂದಿಕೆಯಾಗುತ್ತದೆ. ಇದನ್ನು ಕಿರಿದಾಗಿ “OM” ಎಂದು ಸಹ ಕರೆಯಬಹುದು. “OM” ಎಂದರೆ ಶಿವಣ್ಣ ಅಭಿನಯದ “ಓಂ” ಕೂಡ ನೆನಪಾಗುತ್ತದೆ. ಕನ್ನಡದಲ್ಲಿ ಶಿವರಾಜಕುಮಾರ್ ಹಾಗೂ ತೆಲುಗಿನಲ್ಲಿ ಸುನೀಲ್ ಅವರು ನಾಯಕರಾಗಿ ನಟಿಸುತ್ತಿರುವ “ಒರಿಜಿನಲ್ ಮಾನ್ ಸ್ಟರ್” ಆರಂಭದಿಂದಲೇ ಸಾಕಷ್ಟು ಕುತೂಹಲ ಮೂಡಿಸುತ್ತಿದೆ.
ಯಶ್, ರಿಷಭ್ ಶೆಟ್ಟಿ, ಪ್ರಶಾಂತ್ ನೀಲ್ ಹಾಗೂ ಆರ್ ಚಂದ್ರು ಅವರಂತಹ ಕನ್ನಡಿಗರು ಪ್ರಸ್ತುತ ಕನ್ನಡದ ಸಿನಿಮಾಗಳನ್ನು ಇಡೀ ವಿಶ್ವವೇ ತಿರುಗಿ ನೋಡುವ ಹಾಗೆ ಮಾಡುತ್ತಿದ್ದಾರೆ. ಇದು ನಿಜಕ್ಕೂ ಕನ್ನಡಿಗರು ಹೆಮ್ಮೆ ಪಡುವ ವಿಷಯ.
ಸದ್ಯ ಆರ್ ಚಂದ್ರು ನಿರ್ಮಾಣದ, ಡಾರ್ಲಿಂಗ್ ಕೃಷ್ಣ ಹಾಗೂ ಪ್ರಕಾಶ್ ರಾಜ್ ನಟನೆಯ “ಫಾದರ್” ಚಿತ್ರ ಸಹ ಬಿಡುಗಡೆ ಹಂತದಲ್ಲಿದ್ದು, ಇತ್ತೀಚೆಗೆ ಬಿಡುಗಡೆಯಾಗಿರುವ ಟೀಸರ್ ಗೆ ನಿರೀಕ್ಷೆಗೂ ಮೀರಿ ಮೆಚ್ಚುಗೆ ಸಿಗುತ್ತಿದೆ..

